ಈ ಬ್ಲಾಗ್ ಅನ್ನು ಹುಡುಕಿ

ಗುರುವಾರ, ಆಗಸ್ಟ್ 20, 2020

ಎಲ್. ಎಸ್ ಶೇಷಗಿರಿರಾವ್

 ಎಲ್. ಎಸ್ ಶೇಷಗಿರಿರಾವ್

ಕನ್ನಡ ಸಾಹಿತ್ಯಕ್ಕೆ ನೀಡಿದ ಅಮೂಲ್ಯ ಶಬ್ದಕೋಶ
ಕನ್ನಡ ಸಾಹಿತ್ಯಕ್ಕೆ ನೀಡಿದ ಅಮೂಲ್ಯ ಸಾಹಿತ್ಯ ಚರಿತ್ರೆ

 ಎಲ್. ಎಸ್ ಶೇಷಗಿರಿರಾವ್ ಅವರು

 ಎಲ್. ಎಸ್ ಶೇಷಗಿರಿರಾವ್ ಅವರ ಕುರಿತು ಮಾಹಿತಿ :

ವಿಕಿಪೀಡಿಯಾದಿಂದ ಪರಿಶೀಲಿತ ಮಾಹಿತಿ:

ಎಲ್.ಎಸ್.ಶೇಷಗಿರಿರಾವ್ (೧೯೨೫ ಫೆಬ್ರುವರಿ ೧೬ - ೨೦ ಡಿಸೆಂಬರ್ ೨೦೧೯) ಅವರು ಕನ್ನಡದ ಒಬ್ಬ ಹಿರಿಯ ಸಾಹಿತಿ, ವಿಮರ್ಶಕ ಮತ್ತು ನಿಘಂಟು ತಜ್ಞರು.

ಜೀವನ[ಬದಲಾಯಿಸಿ]

ಎಲ್.ಎಸ್.ಶೇಷಗಿರಿರಾವ್ ಅವರು ೧೯೨೫ ಫೆಬ್ರುವರಿ ೧೬ರಂದು ಬೆಂಗಳೂರಿನಲ್ಲಿ ಜನಿಸಿದರು. ಮೂಲತಃ ದೇಶಪಾಂಡೆ ಮನೆತನದವರಾದ ಇವರ ತಂದೆ, ಲಕ್ಷ್ಮೇಶ್ವರ ಸ್ವಾಮಿರಾಯರು. ಶೇಷಗಿರಿರಾಯರು, ಸೆಂಟ್ರಲ್ ಕಾಲೇಜಿನಲ್ಲಿ ಬಿ.ಏ.(ಗೌರವ) ಪದವಿ ಪರೀಕ್ಷೆಯಲ್ಲಿ ಪ್ರಥಮ ತರಗತಿಯಲ್ಲಿ ಉತ್ತೀರ್ಣರಾದರು. ಎಚ್.ವಿ. ನಂಜುಂಡಯ್ಯ ಚಿನ್ನದ ಪದಕ ಪಡೆದ ಮೊದಲ ವಿದ್ಯಾರ್ಥಿ ಇವರು.ತದನಂತರ ಬೆಂಗಳೂರು ಇಂಟರಮೀಡಿಯೆಟ್ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾದರು.

ಸಾಹಿತ್ಯ ಸೇವೆ[ಬದಲಾಯಿಸಿ]

೧೯೪೮ರಲ್ಲಿ ಶೇಷಗಿರಿರಾವ್ ಅವರ ಮೊದಲ ಕಥಾಸಂಕಲನ “ ಇದು ಜೀವನ ” ಪ್ರಕಟವಾಯಿತು. ಕನ್ನಡ ಸಾರಸ್ವತಲೋಕದಲ್ಲಿ ತಮ್ಮದೆ ಒಂದು ಛಾಪನ್ನು ಸ್ಥಾಪಿಸಿರುವ ಎಲ್. ಎಸ್. ಎಸ್, ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಮಾಡಿರುವ ಕಾರ್ಯಗಳು ನಿಜಕ್ಕೂ ಶ್ಲಾಘನೀಯ. ನೂರಾರು ಚಿಕ್ಕ-ಪುಟ್ಟ ಹೊತ್ತಿಗೆಗಳನ್ನು ಅವರು ರಾಷ್ಶ್ಟೋತ್ಥಾನ ಪರಿಷತ್ ವತಿಯಿಂದ ಪ್ರಕಟಿಸಿದ್ದಾರೆ. ಇದು ಮಕ್ಕಳ ಜ್ಞಾನವರ್ಧನೆಗೆಂದು ಹಮ್ಮಿಕೊಂಡ ಕೆಲಸವಾಗಿತ್ತು. ಅದರ ಬೆಲೆ ಕೇವಲ, ೭೫ ಪೈಸೆಗಳು. ಈ ಪುಸ್ತಕಗಳು ಹಿರಿಯರಿಗೂ, ಅತ್ಯಂತ ಉಪಯುಕ್ತಮಾಹಿತಿಗಳನ್ನು ಕೊಟ್ಟಿವೆ. ತುಂಬಾ ಚೆನ್ನಾಗಿವೆ. ರಾಯರ ಸಂಪಾದನೆಯ ಚಟುವಟಿಕೆಯಲ್ಲಿ, ಬೆಂಗಳೂರು ದರ್ಶನ ಸಂಪುಟಗಳು, ಅತ್ಯಂತ ಉಪಯುಕ್ತಮಾಹಿತಿಗಳನ್ನು ಬೆಂಗಳೂರಿನ ಜನರಿಗೆ ಕೊಟ್ಟಿವೆ. ವಿಶ್ವಕೋಶದತರಹವೇ ಸಂಯೋಜಿಸಿರುವ ಈ ಬೃಹದ್ ಸಂಪುಟಗಳು, ಅತ್ಯಂತ ಶ್ರಮವಹಿಸಿ, ವಿದ್ವಾಂಸರಿಂದ ತಯಾರಿಸಲ್ಪಟ್ಟ ಮಾಹಿತಿಗಳು. ಪ್ರತಿಯೊಬ್ಬ ಬೆಂಗಳೂರಿನ ನಾಗರಿಕನ ಮನೆಯಲ್ಲೂ ಪಡಸಾಲೆಯ ಕಪಾಟಿನ ಶೋಭೆಯನ್ನು ವಿಜೃಂಭಿಸುವ ಕೃತಿಗಳಿವು.[೧]

ಪ್ರಮುಖ ಕೃತಿಗಳು[ಬದಲಾಯಿಸಿ]

ಸಣ್ಣಕಥೆಗಳ ಸಂಕಲನಗಳು[ಬದಲಾಯಿಸಿ]

ಅ) ಇದು ಜೀವನ. ಆ) ಜಂಗಮಜಾತ್ರೆಯಲ್ಲಿ. ಇ) ಮುಟ್ಟಿದ ಗುರಿ ಮತ್ತು ಇತರ ಕಥೆಗಳು. ಈ) ಮುಯ್ಯಿ.

ಸಾಹಿತ್ಯವಿಮರ್ಶೆ[ಬದಲಾಯಿಸಿ]

ಅ. ಕಾದಂಬರಿ-ಸಾಮಾನ್ಯಮನುಷ್ಯ. ಆ. ಆಲಿವರ್ ಗೋಲ್ಡ್ ಸ್ಮಿತ್, ಇ. ಮಾಸ್ತಿ ವೆಂಕಟೇಶ ಐಯ್ಯಂಗಾರ್. ಈ. ಇಂಗ್ಲೀಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ.

ವಿಮರ್ಶೆ[ಬದಲಾಯಿಸಿ]

  • ಅ) ಪಾಶ್ಚಾತ್ಯಸಾಹಿತ್ಯ ವಿಹಾರ.
  • ಆ) ಸಾಹಿತ್ಯ ವಿಶ್ಲೇಷಣೆ.
  • ಇ) ಹೊಸಗನ್ನಡ ಸಾಹಿತ್ಯ .
  • ಈ) ಫ್ರಾನ್ಸ್ ಕಾಫ್ಕಾ,
  • ಉ) ಗ್ರೀಕ್ ರಂಗಭೂಮಿ ಮತ್ತು ನಾಟಕ.
  • ಊ) ವಿಲಿಯಮ್ ಶೇಕ್ಸ್ ಪಿಯರ್,
  • ಋ) ಸಾಹಿತ್ಯ-ಬದುಕು,
  • ೠ) ಟಿ. ಪಿ. ಕೈಲಾಸಂ,
  • ಏ). ಪಾಶ್ಚಾತ್ಯ ಮತ್ತು ಭಾರತೀಯಮಹಾಕಾವ್ಯ ಪರಂಪರೆಗಳ ಮನೋಧರ್ಮ,
  • ಏ). ಮಾಸ್ತಿ : ಜೀವನ ಮತ್ತು ಸಾಹಿತ್ಯ,
  • ಐ). ಇಂಗ್ಲೀಷ್ ಸಾಹಿತ್ಯ ಚರಿತ್ರೆ,
  • ಒ). ಸಾಹಿತ್ಯದ ಕನ್ನಡಿಯಲ್ಲಿ,
  • ಓ). ಪಾಶ್ಚಾತ್ಯಸಾಹಿತ್ಯಲೋಕದಲ್ಲಿ,
  • ಔ). ಎಲ್. ಎಸ್. ಎಸ್. ಕಂಡ ತ. ರಾ. ಸು.
  • ಅಂ.) ಮಹಾಭಾರತ( ನಾಲ್ಕು ಸಂಪುಟಗಳು).

ನಾಟಕಗಳು[ಬದಲಾಯಿಸಿ]

ಅ) ಆಕಾಂಕ್ಷೆ ಮತ್ತು ಆಸ್ತಿ. ಆ) ಜೀವನ ಚರಿತ್ರೆ ಇ) ಸಾರ್ಥಕ ಸುಬೋಧ, ಈ) ಎಂ. ವಿಶ್ವೇಶ್ವರಯ್ಯ,

ನಿಘಂಟುಗಳು[ಬದಲಾಯಿಸಿ]

  • ಅ) ಐ.ಬಿ.ಎಚ್. ಕನ್ನಡ- ಕನ್ನಡ-ಇಂಗ್ಲೀಷ್ ನಿಘಂಟು,
  • ಆ). ಐ.ಬಿ.ಎಚ್ ಇಂಗ್ಲೀಷ್-ಕನ್ನಡ ನಿಘಂಟು,
  • ಇ). ಐ. ಬಿ. ಎಚ್ ಕನ್ನಡ -ಕನ್ನಡ ನಿಘಂಟು,
  • ಈ) ಸುಭಾಸ್ ಇಂಗ್ಲೀಷ್-ಇಂಗ್ಲೀಷ್-ಕನ್ನಡ ನಿಘಂಟು,
  • ಉ) ಸುಭಾಶ್ ವಿದ್ಯಾರ್ಥಿ ಮಿತ್ರ ಇಂಗ್ಲೀಷ್-ಕನ್ನಡ್ ನಿಘಂಟು,
  • ಊ) ಸುಲಭ ಇಂಗ್ಲೀಷ್ ( ಏನ್ಗ್ಲಿಶ್ ಮದೆ ಎಅಸ್ಯ್.)

ಇತರೆ[ಬದಲಾಯಿಸಿ]

  • ಅ) ಮಕ್ಕಳ ಸಾಹಿತ್ಯ- ೯ ಕೃತಿಗಳು,
  • ಆ) ಮಕ್ಕಳಿಗಾಗಿ-೪ ಕೃತಿಗಳು.
  • ಇ) ಇತರ-೯
  • ಈ) ಅನುವಾದಿತ-೪,
  • ಉ) ಸಂಪಾದಿತ-೯ ಕೃತಿಗಳು ಹಾಗೂ
  • ಊ) ಇಂಗ್ಲೀಷ್ ನಲ್ಲಿ -ಮೂಲ ಅನುವಾದಿತ-ಸಂಪಾದಿತ- ೩೧ ಕೃತಿಗಳು.[೨]

ಪ್ರಶಸ್ತಿ, ಪುರಸ್ಕಾರಗಳು[ಬದಲಾಯಿಸಿ]

  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
  • ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
  • ಸಾಹಿತ್ಯಪರಿಷತ್ತಿನ ವಜ್ರಮಹೋತ್ಸವ ಪ್ರಶಸ್ತಿ.
  • ವರ್ಧಮಾನ ಪ್ರಶಸ್ತಿ.
  • ಡಾ. ಅ.ನ.ಕೃ. ಪ್ರಶಸ್ತಿ.
  • ಬಿ.ಎಮ್.ಶ್ರೀ ಪ್ರಶಸ್ತಿ.
  • ಬಿ.ಎಮ್.ಇನಾಮದಾರ ಪ್ರಶಸ್ತಿ.
  • ಕಾವ್ಯಾನಂದ ಪ್ರಶಸ್ತಿ.
  • ದೇವರಾಜ ಬಹಾದ್ದೂರ ಪ್ರಶಸ್ತಿ.
  • ಮಾಸ್ತಿ ಪ್ರಶಸ್ತಿ.
  • ೨೦೦೭ ರ ಕರ್ನಾಟಕ ಸಾಹಿತ್ಯ ಸಮ್ಮೆಲನದ ಅದ್ಯಕ್ಶರಾಗಿದ್ದರು (ಉಡುಪಿ)

ನಿಧನ[ಬದಲಾಯಿಸಿ]

೨೦ಡಿಸೆಂಬರ್೨೦೧೯ರಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು[೩][೪] 

ಕಾಮೆಂಟ್‌ಗಳಿಲ್ಲ: