ಈ ಬ್ಲಾಗ್ ಅನ್ನು ಹುಡುಕಿ

ಶುಕ್ರವಾರ, ಜೂನ್ 2, 2023

ಮೆಟ್ರೋ ಕಥನ - ೫೫

 ಮೆಟ್ರೋ ಕಥನ - ೫೫


ರಾಜನು ಕುದುರೆಯ ಮೇಲೆ ಹೋಗುವಾಗ ರಾಜನಷ್ಟೇ ಕಂಡನು. ಏಕೆಂದರೆ ಅವನಲ್ಲಿ ಸುಖವಿತ್ತು. ನಿಜವಾಗಿಯೂ ಕುದುರೆ ಅಲ್ಲಿ ಶೋಷಣೆಯೊಳಗಿತ್ತು. ಅದು ಪ್ರತಿ ಕ್ಷಣವೂ ನೋವನ್ನೇ ಅನುಭವಿಸುತ್ತಿತ್ತು. ಆದರೆ ರಾಜನ ಕಾರ್ಯ ದೇವರ ಸೇವೆ ಅನಿಸಿತ್ತು. ಕುದುರೆಯ ಕ್ಷೇಮಕ್ಕಾಗಿ ರಾಜನು ಹಲವು ಯೋಜನೆಗಳನ್ನು ತಂದನು. ಉನ್ನತವಾದ ಪೋಷಣೆ, ಗುಣಮಟ್ಟದ ಆಹಾರ, ಹೊಸತಾದ ಲಾಳ, ರತ್ನಗಂಬಳಿ ಹೀಗೆ. ಕುದುರೆ ಆನಂದಪಟ್ಟಿತು. ಆದರೆ ಈ ಪೋಷಣೆಯು ತನ್ನ ಶೋಷಣೆಗಾಗಿಯೇ ಎಂದು ಕುದುರೆಗೆ ತಿಳಿಯಲೇ ಇಲ್ಲ. ರತ್ನಗಂಬಳಿಯ ಮೇಲೆ ರಾಜ ಕುಳಿತಿದ್ದಾನೆ. ಕುದುರೆ ಚಲಿಸುತ್ತಲೇ ಇದೆ. ಇದು ದೇವರ ಸೇವೆಯೆಂದೇ ತಿಳಿದಿದೆ.


- ಅಂಕುರ

ಕಾಮೆಂಟ್‌ಗಳಿಲ್ಲ: