ಈ ಬ್ಲಾಗ್ ಅನ್ನು ಹುಡುಕಿ

ಶನಿವಾರ, ಜೂನ್ 3, 2023

ಮೆಟ್ರೋ ಕಥನ - ೭೧

 ಮೆಟ್ರೋ ಕಥನ - ೭೧


ಅಂದನು ಮುಂಗಾರಿನ ಹೆಸರಲ್ಲಿ ಮಳೆ ಬಿದ್ದ ನೆಲದಲ್ಲಿ, ಖುಷಿಯಿಂದ ಬೀಜಗಳನ್ನು ಬಿತ್ತಿದನು. ದಿನವಿಡೀ ಶ್ರಮವನ್ನು, ಬೀಜಗಳ ಹಸಿವನ್ನು, ರಾತ್ರಿಯ ಮಳೆಯು ತೇಲಿಸಿತ್ತು. ಕಳೆದೆಂಟು ದಿನದಲ್ಲಿ ಹುಟ್ಟಿದ್ದು ಬರಿಕಸವು, ಅಂದನಿಗೆ ಇದು ಹೊಸತೇನೂ ಅಲ್ಲ. ಮತ್ತೆ ಹೊಲವನ್ನು ಹದ ಮಾಡಿ ಬಿತ್ತಿದನು. ಹಠದಂತೆ ಬಂದ ಮಳೆಯು ಮತ್ತೆ ನಾಶದ ಯುದ್ಧ ಮಾಡಿತು. ರೈತನಾದ ಅಂದನಿಗೆ ತಾಳ್ಮೆ ಇದೆ, ಬೇಸರಿಸದೆ ಹಿಂಗಾರು ಮಳೆಗಾಗಿ ಈಗ ಹೊಲವನ್ನು ಹದ ಮಾಡುತ್ತಿದ್ದಾನೆ.

- ಅಂಕುರ

ಕಾಮೆಂಟ್‌ಗಳಿಲ್ಲ: