ಈ ಬ್ಲಾಗ್ ಅನ್ನು ಹುಡುಕಿ

ಶನಿವಾರ, ಜೂನ್ 17, 2023

ಮೆಟ್ರೋ ಕಥನ -೮೯

 ಮೆಟ್ರೋ ಕಥನ -೮೯


ಸೂರ್ಯಕಾಂತಿ ಗಿಡದಲ್ಲಿ ಮೊಗ್ಗಾಗಿ, ಹೂವರಳಿ, ತೆನೆ ಬಲಿತು ತಲೆದೂಗುತ್ತಿತ್ತು. ಗಿಳಿಗಳು ಬಂದು ತೆನೆಯಲ್ಲಿ ಕುಕ್ಕಿ ಕುಕ್ಕಿ ತಿಂದು ಹಾರಿಹೋದವು. ಇದನ್ನು ನೋಡಿದ ಸನ್ಯಾಸಿಯೊಬ್ಬರು ತನ್ನ ಶಿಷ್ಯರಿಗೆ ಈ ರೀತಿಯಲ್ಲಿ ಪುರಾಣ ಬಿಗಿದರು. ಈ ತೆನೆಯು ಆ ಗಿಳಿಗಳಿಗಾಗಿಯೇ ಹುಟ್ಟಿತ್ತು. ಆ ಗಿಳಿಗಳು ಇದನ್ನು ತಿಂದು ಈ ಗಿಡಕ್ಕೆ ಮೋಕ್ಷ ನೀಡಿದವು ಎಂದರು. ಖಾಲಿ ತೆನೆಯೊಂದು ಮಡಿಲು ಕಳಚಿದ ಅನಾಥಪ್ರಜ್ಞೆಯಲ್ಲಿ ನೋಡುತ್ತಿತ್ತು.


- ಅಂಕುರ

ಕಾಮೆಂಟ್‌ಗಳಿಲ್ಲ: