ಈ ಬ್ಲಾಗ್ ಅನ್ನು ಹುಡುಕಿ

ಶುಕ್ರವಾರ, ಜೂನ್ 2, 2023

ಮೆಟ್ರೋ ಕಥನ - ೬೬

 ಮೆಟ್ರೋ ಕಥನ - ೬೬


ಯುವಕನ ಸಾವಿಗೆ ಎಲ್ಲರೂ ಮಮ್ಮಲ ಮರುಗಿದರು. ಓಂ ಶಾಂತಿ, ಮತ್ತೆ ಹುಟ್ಟಿ ಬಾ, ಇದು ತುಂಬಲಾರದ ನಷ್ಟ ಹೀಗೆ ಹಲವಾರು ನೊಂದ ನುಡಿಗಳ ಸಿಕ್ಕಲ್ಲೆಲ್ಲಾ ಬರೆದರು. ಹುಡುಗನ ತಾಯಿ ಆಸ್ಪತ್ರೆಯಲ್ಲಿ ಬಿಲ್ಲು ಕಟ್ಟಲಾಗದೆ, ತಾಳಿ ಮಾರಿ ಹೆಣ ತಂದಳು. ಸಂಸ್ಕಾರಕ್ಕೆ ಹಣ ಇಲ್ಲದೆ, ಸಿಕ್ಕಸಿಕ್ಕವರಲ್ಲಿ ಅಂಗಲಾಚಿ ಮಣ್ಣು ಮಾಡಿದಳು. ಆದರೆ ಮಾಧ್ಯಮ ಇನ್ನೂ ಮಾತಾಡುತ್ತಲೆ ಇತ್ತು. ಇದ್ದಾಗ ಮಾತಾಡಿಸದ, ಕಷ್ಟ ಎಂದಾಗ ಕೈ ಹಿಡಿಯದ ಜನರೆಲ್ಲಾ ಎಲ್ಲದನ್ನೂ ಸೂತಕದಂತೆ ಕಳುಚುತ್ತಾರೆ. ಮಾತು ಕೃತಿಯಾಗಲಿಲ್ಲ.


- ಅಂಕುರ

ಕಾಮೆಂಟ್‌ಗಳಿಲ್ಲ: