ಈ ಬ್ಲಾಗ್ ಅನ್ನು ಹುಡುಕಿ

ಭಾನುವಾರ, ಏಪ್ರಿಲ್ 5, 2020

ಕನ್ನಡ ಸಾಹಿತ್ಯ ಸಂಗ್ರಹ

ಕನ್ನಡ ಸಾಹಿತ್ಯ ಸಂಗ್ರಹ



 ಕಣಜ- ಕರ್ನಾಟಕ ಸರ್ಕಾರ

ಕನ್ನಡ ಸಾಹಿತ್ಯ ಪುಸ್ತಕಗಳು






ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳು



ಡಿಜಿಟಲ್ ಗ್ರಂಥ ಭಂಡಾರ

www.dli.ernet.in ( digital library of  India) website ನಲ್ಲಿ ಸಿಗುವ ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು.. ಎಲ್ಲ ಸೇರಿ ಸುಮಾರು 2700 ಪುಸ್ತಕಗಳು ಲಭ್ಯ.. ನೀವು ಇದರ ಪ್ರಯೋಜನ ಪಡೆದುಕೊಳ್ಳಿ. ಸ್ನೇಹಿತರಿಗೂ ತಲುಪಿಸಿ.

 ಮಾಹಿತಿ



































ಕೆಂಡಸಂಪಿಗೆ ವೆಬ್ಸೈಟ್ ನಲ್ಲಿನ ಪುಸ್ತಕಗಳು
https://kendasampige.in/books/


ಕನ್ನಡ ಸಿರಿ


ಸಾಹಿತ್ಯದ ಕೆಲವು ಪಿಡಿಎಫ್ ಪುಸ್ತಕಗಳು

ಕ್ರ.ಸಂ
ಕೃತಿಯ ಹೆಸರು
ಗಾತ್ರ
1.      
ಅಗ್ನಿಹಂಸ-ಕುವೆಂಪು.pdf
View    Download
3171k
2.      
ಅಪೂರ್ವ ಪಶ್ಚಿಮ.pdf
View     Download
6380k
3.      
ಅಮರ ಚಿತ್ರಕಥೆ.pdf
View    Download
7222k
4.      
ಅಮರ ಪ್ರೇಮದ ಮಧು.pdf
View    Download
4416k
5.      
ಅರಮನೆ-.pdf
View    Download
6484k
6.      
ಉತ್ತರ_ಕರ್ನಾಟಕ_ಜಾನಪದ_ಕಥೆಗಳು.pdf
View    Download
3590k
7.      
ಎದೆಗೆ ಬಿದ್ದ ಅಕ್ಷರ.pdf
View    Download
874k
8.      
ಒಡನಾಟ.pdf
View    Download
10432k
9.      
ಕನಕದಾಸರ ಕೀರ್ತನೆಗಳು & ಮುಂಡಿಗೆಗಳು.pdf
View    Download
17741k
10.  
ಕನ್ನಡಕರ್ನಾಟಕ ಏನು ಮಾಡಬೇಕು.pdf
View    Download
3559k
11.  
ಕನ್ನಡ ಪ್ರಬಂಧಗಳು.pdf
View    Download
7038k
12.  
ಕವಿಗಳು.pdf
View    Download
1620k
13.  
ಕಿಂಕಿಣಿ-ಕುವೆಂಪು.pdf
View    Download
2332k
14.  
ಕಿರಗೂರಿನ ಗಯ್ಯಾಳಿಗಳು.pdf
View    Download
5831k
15.  
ಕೃತ್ತಿಕೆ-ಕುವೆಂಪು..pdf
View    Download
2590k
16.  
ಕೋಗಿಲೆ ಮತ್ತು ಸೋವಿಯತ್ ರಷ್ಯಾ-ಕುವೆಂಪು.pdf
View    Download
2687k
17.  
ಗದಾಯುದ್ಧ ಸಂಗ್ರಹ thi nam Sri .pdf
View    Download
4573k
18.  
ಗಾದೆಗಳ ಲೋಕ.pdf
View    Download
2166k
19.  
ಗಾದೆ ಪಂಡಿತ ಹು..ರಾಮಾರಾಧ್ಯ.pdf
View    Download
5951k
20.  
ಗೌರ್ಮೆಂಟ್_ಬ್ರಾಹ್ಮಣ.pdf
View    Download
1403k
21.  
ಗ್ರಾಮಾಯಣ.pdf
View    Download
1994k
22.        
 ಗದಾಯುದ್ಧ ಸಂಗ್ರಹ thi nam Sri .pdf
View    Download
4573k
23.  
ಗಾದೆಗಳ ಲೋಕ.pdf
View    Download
2166k
24.  
ಗಾದೆ ಪಂಡಿತ ಹು..ರಾಮಾರಾಧ್ಯ.pdf
View    Download
5951k
25.  
ಗೌರ್ಮೆಂಟ್_ಬ್ರಾಹ್ಮಣ.pdf
View    Download
1403k
26.  
ಚಂಧ್ರಹಾಸ.pdf
View    Download
695k
27.  
ಚಿಗುರಿದ ಕನಸು.pdf
View    Download
5022k
28.  
ಚಿದಂಬರ_ರಹಸ್ಯ.pdf
View    Download
3390k
29.  
ಜೈಮಿನಿ_ಭಾರತ.pdf
View    Download
1645k
30.  
ಜ್ಯೋತಿಯೇ ಆಗು ಜಗಕೆಲ್ಲ.pdf
View    Download
1642k
31.  
ತತ್ಸಮ ತದ್ಬವ -Merged-1.pdf
View    Download
214k
32.  
ತೀ.ನಂ.ಶ್ರೀಸಮಗ್ರ ಗದ್ಯ.pdf
View    Download
8921k
33.  
ದಾಟು.pdf
View    Download
4262k
34.  
ನಕ್ಕು ನಲಿಯುವ.pdf
View    Download
4997k
35.  
ನನ್ನ_ನಲ್ಲ.pdf
View    Download
2048k
36.  
ಪರ್ಣಕುಟಿ.pdf
View    Download
1552k
37.  
ಪಾತ್ರೆ ಪರಿಕರ ಸಿ....pdf
View    Download
430k
38.  
ಪುರಾಣ ಹಾಗು ಚರಿತ್ರೆಗಳ ಹಿನ್ನೆಲೆಯಲ್ಲಿ ಪಂಪನ ಕಾವ್ಯಗಳು.pdf
View    Download
3661k
39.  
ಪ್ರಭುಲಿಂಗಲೀಲೆ.pdf
View    Download
4089k
40.  
ಬಜೆಟ್ 2017 ಕನ್ನಡ.pdf
View    Download
335k
41.  
ಭಗವದ್ಗೀತಾ-ಯಥಾರೂಪ.pdf
View    Download
6119k
42.  
ಭಗವದ್ಗೀತೆ - ಬನ್ನಂಜೆ .pdf
View    Download
2863k
43.  
ಭರತೇಶ ವೈಭವ ಸಂಗ್ರಹ.pdf
View    Download
7596k
44.  
ಭಾರತೀಯ ಸ್ಮೃತಿಗಳು1.pdf
View    Download
18134k
45.  
ಮರದೊಳಗಣ_ಕಿಚ್ಚು.pdf
View    Download
2584k
46.  
ಮಲೆಗಳಲ್ಲಿ ಮದುಮಗಳು.pdf
View    Download
2089k
47.  
ಮೂಕಜ್ಜಿಯ ಕನಸುಗಳು.pdf
View    Download
1897k
48.  
ವ್ಯಾಕರಣ kannada grammer-1-1.pdf
View    Download
264k
49.  
ಹೆಜ್ಜೆಗುರುತು. pdf
View    Download
713k
50.  
ಕಟ್ಟೆ ಪುರಾಣ.pdf
View    Download
2073k
51.  
ಸಂಸ್ಕಾರ_ಯು.ಆರ್.ಅನಂತಮೂರ್ತಿ.pdf
View    Download
385k
52.  
ರಕ್ತಾಕ್ಷಿ - ಕುವೆಂಪು.pdf
View    Download
6879k
53.  
ವಿವೇಕ ಚಿಂತಾಮಣಿ.pdf
View    Download
4443k
54.  
ವ್ಯಾಕರಣ ಮಾರ್ಗ.pdf
View    Download
713k
55.  
ಶಿಕ್ಷಕರ ವರ್ಗಾವಣಾ ಕಾಯ್ದೆ-2017.pdf
View    Download
579k
56.  
ಶೇಕ್ಸ್‌ ಪಿಯರ್ ಎರಡು ನಾಟಕಗಳ ಅಧ್ಯಯನ.pdf
View    Download
5931k
57.  
ಷೋಡಶಿ-ಕುವೆಂಪು.pdf

ಶನಿವಾರ, ಫೆಬ್ರವರಿ 22, 2020

ಕುರುಡು ಕಾಂಚಾಣಾ………………………ದ. ರಾ. ಬೇಂದ್ರೆ



ಕುರುಡು ಕಾಂಚಾಣಾ ಕುಣಿಯುತಲಿತ್ತು |
ಕಾಲಿಗೆ ಬಿದ್ದವರ ತುಳಿಯುತಲಿತ್ತೋ ||
                        ಕುರುಡು ಕಾಂಚಾಣಾ ||
      ಬಾಣಂತಿಯೆಲುಬ ಸಾ-
      ಬಾಣದ ಬಿಳುಪಿನಾ
      ಕಾಣದ ಕಿರುಗೆಜ್ಜೆ ಕಾಲಾಗ ಇತ್ತೋ;
               ಸಣ್ಣ ಕಂದಮ್ಮಗಳ
               ಕಣ್ಣೀನ ಕವಡಿಯ
               ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ;
      ಬಡವರ ಒಡಲಿನ
      ಬಡಬಾsನಲದಲ್ಲಿ
      ಸುಡು ಸುಡು ಪಂಜು ಕೈಯೊಳಗಿತ್ತೋ;
               ಕಂಬನಿ ಕುಡಿಯುವ
               ಹುಂಬ ಬಾಯಿಲೆ ಮೈ-
               ದುಂಬಿದಂತುಧೋ ಉಧೋ ಎನ್ನುತಲಿತ್ತೋ;
      ಕೂಲಿ ಕುಂಬಳಿಯವರ
      ಪಾಲಿನ ಮೈದೊಗಲ
      ಧೂಳಿಯ ಭಂಡಾರ ಹಣೆಯೊಳಗಿತ್ತೋ;
               ಗುಡಿಯೊಳಗೆ ಗಣಣ, ಮಾ
               ಹಡಿಯೊಳಗೆ ತನನ, ಅಂ-
               ಗಡಿಯೊಳಗೆ ಝಣಣಣ ನುಡಿಗೊಡುತಿತ್ತೋ;
      ಹ್ಯಾಂಗಾರೆ ಕುಣಿಕುಣಿದು
      ಮಂಗಾಟ ನಡೆದಾಗ
      ಅಂಗಾತ ಬಿತ್ತೋ, ಹೆಗಲಲಿ ಎತ್ತೋ.

‘ಕುರುಡು ಕಾಂಚಾಣಾ’ ಕವನವು ಅಂಬಿಕಾತನಯದತ್ತರ ‘ನಾದಲೀಲೆ’ ಕವನಸಂಗ್ರಹದಲ್ಲಿ ಅಡಕವಾಗಿದೆ. ಈ ಕವನಸಂಕಲನವು ೧೯೩೮ನೆಯ ಇಸವಿಯಲ್ಲಿ ಪ್ರಕಟವಾಯಿತು. ಬ್ರಿಟಿಶ್ ಸರಕಾರದ ಶೋಷಣೆಯ ನೀತಿಯಿಂದಾಗಿ ಭಾರತೀಯರು ಕಡುಕಷ್ಟವನ್ನು ಎದುರಿಸುತ್ತಿದ್ದ ಕಾಲವದು; ಸಾಮಾನ್ಯ ಪ್ರಜೆಗಳು ಒಂದು ತುತ್ತು ಕೂಳಿಗಾಗಿ ಪರದಾಡುತ್ತಿರುವಾಗ, ಸರಕಾರವು ಹಾಗು ಸರಕಾರದ ಚೇಲಾಗಳಾದ ಲಾಭಬಡುಕರು ಮೆರೆದಾಡುತ್ತಿದ್ದ ಕಾಲವದು; ಮಾನವೀಯತೆಯು ಸತ್ತು ಹೋಗಿ, ನರಭಕ್ಷಣೆಯೇ ಮೇಲ್ಗೈ ಸಾಧಿಸಿದಂತಹ ಕಾಲವದು. ಈ ಸಂಕಟಮಯ ಪರಿಸ್ಥಿತಿಯು ಬೇಂದ್ರೆಯವರ ಕವನಗಳಲ್ಲಿ ವ್ಯಕ್ತವಾಗಿದೆ. ‘ನಾದಲೀಲೆ’ ಸಂಕಲನದಲ್ಲಿಯೇ ಇರುವ ‘ಮನುವಿನ ಮಕ್ಕಳು’, ‘ಅನ್ನಾವತಾರ’, ‘ಭೂಮಿತಾಯಿಯ ಚೊಚ್ಚಲ ಮಗ’  ಹಾಗು ‘ಗರಿ’ ಸಂಕಲನದಲ್ಲಿರುವ  ‘ತುತ್ತಿನ ಚೀಲ’ ಮೊದಲಾದ ಕವನಗಳು ಇದಕ್ಕೆ ನಿದರ್ಶನಗಳಾಗಿವೆ.
………………………………………………………………
ಕುರುಡು ಕಾಂಚಾಣಾ ಕುಣಿಯುತಲಿತ್ತು |
ಕಾಲಿಗೆ ಬಿದ್ದವರ ತುಳಿಯುತಲಿತ್ತೋ ||
                   ಕುರುಡು ಕಾಂಚಾಣಾ ||

‘ಕುರುಡು ಕಾಂಚಾಣಾ’ ಎನ್ನುವುದು ಒಂದು personification. ಕಾಂಚಾಣಲೋಭಿ ಹೃದಯಹೀನರ ಪ್ರತೀಕವಿದು. ಇವರು ಕುಣಿಯುವುದು ಸಂಪತ್ತಿನ ದೇವಿಯ ಎದುರಿನಲ್ಲಿ. ಸಂಪತ್ತು ಕೇವಲ ಕೆಲವರ ಐಶಾರಾಮಿಗಾಗಿ ಇರದೆ ಸರ್ವರ ಒಳಿತಿಗಾಗಿ, ಏಳ್ಗೆಗಾಗಿ ಇರಬೇಕು. ಮಾನವೀಯತೆಯನ್ನು ಕಡೆಗಣಿಸುವ ಸಂಪತ್ತನ್ನು ಬೇಂದ್ರೆಯವರು ‘ಕುರುಡು ಕಾಂಚಾಣಾ’ ಎಂದು ಕರೆಯುತ್ತಾರೆ. ಇಂತಹ ಕುರುಡು ಕಾಂಚಾಣದ ಉನ್ಮಾದದ ಕುಣಿತವನ್ನು ಬೇಂದ್ರೆಯವರು (ಎಲ್ಲಮ್ಮನ)ಜೋಗತಿಯ ಉನ್ಮಾದದ ಕುಣಿತದೊಂದಿಗೆ ಹೋಲಿಸುತ್ತಿದ್ದಾರೆ. ಪಲ್ಲದ ಮೊದಲ ಸಾಲಿನಲ್ಲಿ ‘ಕುಣಿಯುತಲಿತ್ತು’ ಎನ್ನುವ ಸಾಮಾನ್ಯ ನೋಟದೊಂದಿಗೆ ಪ್ರಾರಂಭವಾಗುವ ಕವನವು, ಎರಡನೆಯ ಸಾಲಿನಲ್ಲಿ ‘ತುಳಿಯುತಲಿತ್ತೋ’ ಎನ್ನುವ ಪದದಿಂದ ಉದ್ವಿಗ್ನತೆಯನ್ನು, ಹತಾಶೆಯನ್ನು ವ್ಯಕ್ತಪಡಿಸುತ್ತದೆ. ಎಲ್ಲಮ್ಮನ ಜೋಗತಿ ಹಾಗು ಕಾಂಚಾಣಜೋಗತಿ ಈರ್ವರೂ ಜೋಗತಿಯರೇ. ಎಲ್ಲಮ್ಮನ ಜೋಗತಿ ಭಕ್ತಿಯ ಉನ್ಮಾದದಲ್ಲಿದ್ದರೆ, ಕಾಂಚಾಣಜೋಗತಿ ದುಡ್ಡಿನ ಉನ್ಮಾದದಲ್ಲಿದ್ದಾಳೆ.  ಈ ಕವನದಲ್ಲಿ ಇವಳ ತೊಡುಗೆಯನ್ನು ಅವಳಿಗಿಟ್ಟು ಬೇಂದ್ರೆಯವರು ಚಿತ್ರಿಸಿದ್ದಾರೆ.

ಮೈಮೇಲೆ ದೇವಿ ಬಂದಾಗ, ಎಲ್ಲಮ್ಮನ ಜೋಗತಿಯು ಉನ್ಮಾದದಿಂದ ಕುಣಿಯುತ್ತಾಳೆ. ಅನೇಕ ಭಕ್ತರು ಜೋಗತಿಯ ಕಾಲಿಗೆ ಬಿದ್ದು, ಅವಳಿಂದ (ಎಲ್ಲಮ್ಮನ) ಅನುಗ್ರಹವನ್ನು ಪಡೆಯುತ್ತಾರೆ. ಕುರುಡು ಕಾಂಚಾಣವೂ ಸಹ ಅದೇ ರೀತಿಯಲ್ಲಿ ಉನ್ಮಾದದಿಂದ ಕುಣಿಯುತ್ತಿದೆ. ಹೊಟ್ಟೆಗಿಲ್ಲದ ಜನರು ಎರಡು ತುತ್ತು ಕೂಳಿಗಾಗಿ ಇವಳ ಕಾಲಿಗೆ ಬೀಳುತ್ತಾರೆ. ಅವರನ್ನೆಲ್ಲ ಈ ಜೋಗತಿ ತುಳಿದು ಹಾಕುತ್ತಾಳೆ. ಈ ರೀತಿಯಾಗಿ ಕವನದ ಪಲ್ಲದಲ್ಲಿ ‘ಕಾಂಚಾಣ-ಜೋಗತಿಯ’ ಕುಣಿತವನ್ನು  ಬೇಂದ್ರೆಯವರು (ಎಲ್ಲಮ್ಮನ) ಜೋಗತಿಗೆ ಹೋಲಿಸಿ ಚಿತ್ರಿಸಿದ್ದಾರೆ; ಮುಂದಿನ ನುಡಿಗಳಲ್ಲಿ, ಅವಳ ವೇಷಭೂಷಗಳನ್ನು ವರ್ಣಿಸಿದ್ದಾರೆ.

     ಬಾಣಂತಿಯೆಲುಬ ಸಾ-
     ಬಾಣದ ಬಿಳುಪಿನಾ
     ಕಾಣದ ಕಿರುಗೆಜ್ಜೆ ಕಾಲಾಗ ಇತ್ತೋ;
              ಸಣ್ಣ ಕಂದಮ್ಮಗಳ
             ಕಣ್ಣೀನ ಕವಡಿಯ
             ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ;

(ಎಲ್ಲಮ್ಮನ) ಜೋಗತಿಯು ತನ್ನ ಕಾಲಲ್ಲಿ ಬೆಳ್ಳಿಯ ಕಿರುಗೆಜ್ಜೆಗಳನ್ನು ಧರಿಸಿರುತ್ತಾಳೆ. ಕಾಂಚಾಣಜೋಗತಿಯೂ ಸಹ ತನ್ನ ಕಣಕಾಲುಗಳಲ್ಲಿ ಕಿರುಗೆಜ್ಜೆಗಳನ್ನು ಧರಿಸಿದ್ದಾಳೆ. ಆದರೆ ಇವು ಬಾಣಂತಿಯ ಎಲುವಿನಿಂದ ಮಾಡಿದ ಗೆಜ್ಜೆಗಳು. ಈ ಗೆಜ್ಜೆಗಳು ಸವೆದು ಹೋದ ಸಾಬಾಣದಷ್ಟು (soap) ಬೆಳ್ಳಗಿವೆ. ‘ಬಾಣಂತಿಯೆಲುಬು’ ಇಲ್ಲಿ ಎರಡು ಅರ್ಥಗಳನ್ನು ಧ್ವನಿಸುತ್ತದೆ. ಬಾಣಂತಿಯು ಮಗುವನ್ನು ಹೆತ್ತು ಸೃಷ್ಟಿಕ್ರಿಯೆಯನ್ನು ಮುಂದುವರಿಸುವಂತಹ ಹೆಂಗಸು. ಬಡತನದ ಹೊಡೆತದಿಂದಾಗಿ ಹಾಗು ಸಾಮಾಜಿಕ ಅನ್ಯಾಯದಿಂದ ಬಾಣಂತಿಯು ಈಗ ಸತ್ತು ಹೆಣವಾಗಿದ್ದಾಳೆ; ನಿಸರ್ಗಸಹಜವಾದ ಸೃಷ್ಟಿಕಾರ್ಯವು ನಿಂತು ಹೋಗಿದೆ. ಸವೆದು ಹೋಗಿ ಬೆಳ್ಳಗಾದ ಸಾಬಾಣವು ದುಡಿದುಡಿದು ಕ್ಷೀಣವಾದ ಬಾಣಂತಿಯನ್ನು ಸೂಚಿಸುತ್ತದೆ.

ಎರಡನೆಯ ಅರ್ಥವೆಂದರೆ, ಬಾಣಂತಿಯ ಎಲುಬಗಳನ್ನು ಮಾಟಗಾರರು ಅಭಿಚಾರಕ್ರಿಯೆಯಲ್ಲಿ ಬಳಸುತ್ತಾರೆ. ಈ ಕಾಂಚಾಣಜೋಗತಿಯು ತನ್ನ ಕಣಕಾಲುಗಳಲ್ಲಿ ಬಾಣಂತಿಯ ಎಲುವುಗಳ ಕಿರುಗೆಜ್ಜೆಯನ್ನು ಕಟ್ಟಿಕೊಂಡು ಕುಣಿಯುವ ಮಾಟಗಾತಿಯಾಗಿದ್ದಾಳೆ. ಇವಳ ಅಂತಿಮ ಉದ್ದೇಶವು ಸಮಾಜವನ್ನು ಹಾಳುಗೆಡುವುದಾಗಿದೆ. ಆದರೆ ಈ ಗೆಜ್ಜೆಗಳು ‘ಕಾಣದ ಕಿರುಗೆಜ್ಜೆಗಳು’. ಆದುದರಿಂದ ಕಾಂಚಾಣಜೋಗತಿಯ ಕಿರುಗೆಜ್ಜೆಗಳಾಗಲಿ ಅಥವಾ ಅವಳ ಹೀನ ಉದ್ದೇಶವಾಗಲಿ ಸಮಾಜಕ್ಕೆ ಅದೃಶ್ಯವಾಗಿಯೇ ಇರುತ್ತವೆ.

ಇನ್ನು ಈ ಜೋಗತಿ ಧರಿಸಿದಂತಹ ‘ಜೋಮಾಲೆ’(=ಜೋಗತಿಯ ಮಾಲೆ) ಎಂತಹದು? ಬಾಣಂತಿಯನ್ನು ಕೊಂದವಳು ಅವಳ ಮಕ್ಕಳನ್ನು ಬಿಟ್ಟಾಳೆಯೆ?  ಸಣ್ಣ ಕಂದಮ್ಮಗಳು ಮುಗ್ಧ, ಅಸಹಾಯಕ ಜೀವಿಗಳು. ಅವುಗಳ ಕಣ್ಣುಗುಡ್ಡಿಗಳನ್ನೆ ಕಿತ್ತು, ಕವಡಿಗಳ ಮಾಲೆಯನ್ನು ಮಾಡಿಕೊಂಡು ಈ ಜೋಗತಿ ಕೊರಳಲ್ಲಿ ಧರಿಸಿದ್ದಾಳೆ. ಭವಿಷ್ಯದ ಸಂಕೇತಗಳಾದ ಈ ಕಂದಮ್ಮಗಳು ಇದೀಗ ಕುರುಡರಾಗಿದ್ದಾರೆ. ಈ ಮಾಲೆಯು ‘ತಣ್ಣನ್ನ ಜೋಮಾಲೆ’! ಜೋಗತಿಯ ತಣ್ಣನೆಯ ಕ್ರೌರ್ಯಕ್ಕೆ ಇದು ಸಂಕೇತವಾಗಿದೆ.


     ಬಡವರ ಒಡಲಿನ
     ಬಡಬಾsನಲದಲ್ಲಿ
     ಸುಡು ಸುಡು ಪಂಜು ಕೈಯೊಳಗಿತ್ತೋ;
            ಕಂಬನಿ ಕುಡಿಯುವ
            ಹುಂಬ ಬಾಯಿಲೆ ಮೈ-
            ದುಂಬಿದಂತುಧೋ ಉಧೋ ಎನ್ನುತಲಿತ್ತೋ;

ಕೈಯಲ್ಲಿ ಉರಿಯುವ ಪಂಜನ್ನು ಹಿಡಿದುಕೊಂಡು, ದೇವಿಗೆ ‘ಉಧೋ ಉಧೋ’ ಎಂದು ಘೋಷಿಸುವುದು ಜೋಗತಿಯ ಪೂಜೆಯ ಭಾಗವಾಗಿದೆ. ಕಾಂಚಾಣಜೋಗತಿಯ ಕೈಯಲ್ಲೂ ಸಹ ಉರಿಯುತ್ತಿರುವ ಪಂಜಿದೆ. ಇವಳೂ ಸಹ ‘ಉಧೋ ಉಧೋ’ ಎಂದು ಗರ್ಜಿಸುತ್ತಿದ್ದಾಳೆ. ಆದರೆ ಇವಳು ಹಿಡಿದಿರುವುದು ಸಾಧಾರಣ ಪಂಜಲ್ಲ. ಇದು ಬಡವರ ಒಡಲಿನ ಬೆಂಕಿಯ ಪಂಜು. ಬಡವರ ಒಡಲೇ ಒಂದು ಸಮುದ್ರದಷ್ಟು ವಿಶಾಲವಾಗಿದೆ. ಏಕೆಂದರೆ ಇವರ ಹಸಿವೆಯನ್ನು ಹಿಂಗಿಸುವಷ್ಟು ಕೂಳು ಇವರಿಗೆ ಸಿಗುವುದಿಲ್ಲ. ಅಲ್ಲದೆ ಒಬ್ಬನು ಸಿರಿವಂತನಾಗಬೇಕಾದರೆ ನೂರು ಜನ ಬಡವರಾಗಿರಬೇಕಾಗುತ್ತದೆ! ಆದುದರಿಂದ ಬಡವರ ಒಡಲು ಅಪಾರ ಹಾಗು ಅನಂತ ಸಮುದ್ರದಷ್ಟು ಆಳ ಹಾಗು ವಿಶಾಲ! ಸಮುದ್ರದಲ್ಲಿ ಇರುವ ಬೆಂಕಿಗೆ ‘ಬಡಬಾನಲ’ ಎಂದು ಕರೆಯುತ್ತಾರೆ. ಬಡವರ ಒಡಲೊಳಗಿರುವ ಬೆಂಕಿಯು ಹಸಿವಿನ ಬೆಂಕಿ. ಆ ಬೆಂಕಿಯಿಂದ ಹೊತ್ತಿಸಿದ ಪಂಜನ್ನು ಈ ಜೋಗತಿ ಹಿಡಿದಿದ್ದಾಳೆ. (ಬಡಬಾನಲವು ಸಮುದ್ರದ ಬೆಂಕಿ ಎಂದು ಅರ್ಥ ನೀಡುವುದರ ಜೊತೆಗೇ ‘ಬಡವರ+ಅನಲ’ ಎಂದು  ಶ್ಲೇಷೆಯ ಮೂಲಕ ಸೂಚಿಸುವದನ್ನೂ ಗಮನಿಸಬೇಕು.)

’ಉಧೋ ಉಧೋ’ ಎಂದು ಉಗ್ಗಡಿಸುವ ಜೋಗತಿಯ ಮೈಯಲ್ಲಿ ದೇವಿಯ ಆವೇಶ ಬಂದಿರುತ್ತದೆ. ಈ ಕಾಂಚಾಣಜೋಗತಿಯ ಮೈಯಲ್ಲಿಯೂ ಆವೇಶವಿದೆ. ಆದರೆ ಇದು ಕಾಂಚಾಣದ ಆವೇಶ. ಕಾಂಚಾಣವನ್ನು ಹೇಗಾದರೂ ಸಂಪಾದಿಸಬೇಕೆನ್ನುವ ಲೋಭವು ಅವಳನ್ನು ಕುರುಡಳನ್ನಾಗಿ ಮಾಡಿದೆ. ಅವಳ ಬಾಯಿಯಿಂದ ಬರುವ ‘ಉಧೋ ಉಧೋ’ ಎನ್ನುವ ಉಗ್ಗಡಣೆಯು ಪವಿತ್ರವಾದ ಘೋಷವಲ್ಲ; ಇದು ಹುಂಬತನದ ಘೋಷ.  ಇದು ಮುಗ್ಧ, ಅಸಹಾಯಕರ ಕಂಬನಿಯನ್ನು ಕುಡಿಯುವ ಅಪವಿತ್ರ ಬಾಯಿಯಿಂದ ಹೊರಡುತ್ತಿರುವ ಸಂವೇದನಾಶೂನ್ಯ ಘೋಷ.

    ಕೂಲಿ ಕುಂಬಳಿಯವರ
     ಪಾಲಿನ ಮೈದೊಗಲ
     ಧೂಳಿಯ ಭಂಡಾರ ಹಣೆಯೊಳಗಿತ್ತೋ;
            ಗುಡಿಯೊಳಗೆ ಗಣಣ, ಮಾ
            ಹಡಿಯೊಳಗೆ ತನನ, ಅಂ-
            ಗಡಿಯೊಳಗೆ ಝಣಣಣ  ನುಡಿಗೊಡುತಿತ್ತೋ;

ಎಲ್ಲಮ್ಮನ ಜೋಗತಿಯು ಹಣೆಯ ಮೇಲೆ  ಭಂಡಾರವನ್ನು (ಅಂದರೆ ಎಲ್ಲಮ್ಮ ದೇವಿಯ ಅರಿಶಿಣವನ್ನು) ಧರಿಸಿರುತ್ತಾಳೆ. ಈ ಕಾಂಚಾಣಜೋಗತಿಯು ಧರಿಸಿರುವ ಭಂಡಾರವೆಂತಹುದು? ಒಬ್ಬನು ದುಡ್ಡನ್ನು ಕೂಡಿಹಾಕಬೇಕಾದರೆ ನೂರು ಜನ ಬೆವರು ಹರಿಸಬೇಕಲ್ಲವೆ? ಈ ಕೂಲಿ ಜನರು ದುಡಿದುಡಿದು ಸೋತು ಸಣ್ಣಗಾದಾಗ ಇವರ ಮೈಯ ತೊಗಲೂ ಸಹ ಜೋತು ಬಿದ್ದಿರುತ್ತದೆ. ಅದೇ ಇವರ  ಪಾಲಿಗೆ ಉಳಿದಿರುವ ಸಂಪತ್ತು. ಆ ಮೈದೊಗಲಿಗೆ ಹತ್ತಿದ ಧೂಳಿಯೇ ಈ ಕಾಂಚಾಣಜೋಗತಿಯು ತನ್ನ ಹಣೆಯ ಮೇಲೆ ಹಚ್ಚಿಕೊಂಡಂತಹ ಭಂಡಾರವಾಗಿದೆ. (ಭಂಡಾರ ಎಂದರೆ ಸಂಪತ್ತಿನ ಸಂಗ್ರಹಾಲಯ ಎನ್ನುವ ಶ್ಲೇಷೆ ಇಲ್ಲಿದೆ.)

ಇದಾದ ಬಳಿಕ, ದೇವಿಯ ಜೋಗತಿಯು ಗುಡಿಯೊಳಗೆ ಹೋಗಿ ಗಂಟೆ ಬಾರಿಸಿ ಪೂಜೆ ಸಲ್ಲಿಸುವಳಷ್ಟೆ? ಕಾಂಚಾಣಜೋಗತಿಯೂ ಸಹ ತನ್ನ ಹಣದ ಬಲದಿಂದ ಗುಡಿಗಳೊಳಗೆ ಪೂಜೆಯ ಅಧಿಕಾರವನ್ನು ಕೊಳ್ಳುವವಳೇ. (ದುಡ್ಡಿದ್ದವರಿಗೆ ‘ಸ್ಪೆಶಲ್ ದರ್ಶನ’ ಎನ್ನುವುದು ಎಲ್ಲರಿಗೂ ಗೊತ್ತಿದ್ದದ್ದೇ!) ಗುಡಿಗಳಲ್ಲಿ ‘ಗಣಣ’ ಎಂದು ಗಂಟೆ ಬಾರಿಸುವ ಇವಳು ಮಹಡಿಯ ಮನೆಗಳಲ್ಲಿ, ಹಣವುಳ್ಳವರ ಎದುರಿಗೆ ‘ತನನ’ ಎಂದು ಕುಣಿಯುವ ಸಾಮಾನ್ಯ ನಾಚುಗಾತಿಯಾಗುತ್ತಾಳೆ. ಇನ್ನು ದುಡ್ಡಿನ ಕಾರಾಗಾರಗಳಾದ ಅಂಗಡಿಗಳ ಒಳಗಂತೂ ಇವಳ ಝಣಝಣ ಪ್ರತಿಧ್ವನಿ ಯಾವಾಗಲೂ ಕೇಳಿ ಬರುವಂತಹದು. ಹಣದ ಕುಣಿತ ಹೇಗೆ ಸರ್ವವ್ಯಾಪಿಯಾಗಿದೆ, ಸರ್ವಮಾನ್ಯವಾಗಿದೆ ಎನ್ನುವುದನ್ನು ಬೇಂದ್ರೆಯವರು ಇಲ್ಲಿ ವ್ಯಂಗ್ಯವಾಗಿ ಸೂಚಿಸಿದ್ದಾರೆ.

ಹ್ಯಾಂಗಾರೆ ಕುಣಿಕುಣಿದು
     ಮಂಗಾಟ ನಡೆದಾಗ
     ಅಂಗಾತ ಬಿತ್ತೋ,  ಹೆಗಲಲಿ ಎತ್ತೋ.

ಆದರೆ ಇಂತಹ ವಿನಾಶಕಾರಿ ಧಂಧೆ ಎಲ್ಲಿಯವರೆಗೆ ನಡೆದೀತು? ಅದು ಅತಿಶಯಕ್ಕೆ ಮುಟ್ಟಿದಾಗ (--ಪಾಪದ ಕೊಡ ತುಂಬಿದಾಗ ಎಂದು ಹೇಳುತ್ತಾರಲ್ಲವೆ?--) ಈ ಮಂಗಾಟದ ಕುಣಿತಕ್ಕೆ ಕೊನೆಯಾಗಲೇ ಬೇಕು. ತನ್ನ (ಪಾಪದ) ಭಾರ ತಾಳಲಾರದೆ ಈ ಜೋಗತಿ ಕುಸಿದು ಬೀಳಲೇ ಬೇಕು. ‘ಅದು ಬಿದ್ದಾಗ, ತಡ ಮಾಡದೇ ಆ ಶವವನ್ನು ಎತ್ತಿ ಹಾಕಿರಿ’ (--ಅದು ಮತ್ತೆ ಮೈದುಂಬೀತು ಎನ್ನುವ ಹೆದರಿಕೆಯಿಂದಲೆ?--) ಎಂದು ಬೇಂದ್ರೆಯವರು ಹೇಳುತ್ತಾರೆ. ತುಳಿತಕ್ಕೆ ಒಳಗಾದವರ ಆಸೆ ಹಾಗು ಆಶಯವೂ ಸಹ ಇದೇ ಆಗಿದೆ.
                                                                                                         
ಟಿಪ್ಪಣಿ: ಬೇಂದ್ರೆಯವರ ಕವನಗಳು ಕೇವಲ ಹಾಡುವ ಅಥವಾ ಮನನ ಮಾಡುವ ಕವನಗಳಷ್ಟೇ ಅಲ್ಲ. ಅವರು ತಮ್ಮ ಕವನಗಳ ಬರಹವನ್ನೂ ಸಹ ನಿರ್ದಿಷ್ಟ ರೀತಿಯಲ್ಲಿ ಬರೆಯುತ್ತಿದ್ದರು. ಯಾವ ಸಾಲಿನ ಕೆಳಸಾಲು ಎಲ್ಲಿ ಬರಬೇಕು, ಯಾವ ವಿರಾಮಗಳನ್ನು ಎಲ್ಲಿ ಬಳಸಬೇಕು ಎನ್ನುವುದರ ಬಗೆಗೆ ಅವರು ತುಂಬ ಕಾಳಜಿಯಿಂದ ಇರುತ್ತಿದ್ದರು. ಈ ಕವನದ ಮೊದಲ ಆರು ನುಡಿಗಳ ಕೊನೆಯ ಸಾಲುಗಳ ಕೊನೆಯಲ್ಲಿ ಅರ್ಧವಿರಾಮ ಬರುತ್ತದೆ. ಕೊನೆಯ (ಏಳನೆಯ ಸಾಲಿನ) ಕೊನೆಯಲ್ಲಿ ಮಾತ್ರ ಪೂರ್ಣವಿರಾಮ ಬರುತ್ತದೆ. ಕಾಂಚಾಣ-ಜೋಗತಿಯ ಪೂರ್ಣಚಿತ್ರವನ್ನು, ಯಾವುದೇ ವಿರಾಮವಿಲ್ಲದೆ ನೀಡುತ್ತಿದ್ದೇನೆ ಎನ್ನುವುದರ ಸೂಚನೆಯನ್ನು ಬೇಂದ್ರೆಯವರು ನೀಡುತ್ತಿದ್ದಾರೆ. 


ಸಲ್ಲಾಪ ಬ್ಲಾಗ್ ನಿಂದ..

         ಆಡಿಯೋ ಲಿಂಕ್                               https://youtu.be/HKPetWFxqZM

ಶನಿವಾರ, ಫೆಬ್ರವರಿ 8, 2020

ಕೀರ್ತನೆಗಳು

ನಿನ್ನ ಧ್ಯಾನವ ಮಾಡುತ್ತಾ...
-ಶ್ರೀ ವ್ಯಾಸರಾಯರು

ನಿನ್ನ ಧ್ಯಾನವನ್ನು ಮಾಡುತ್ತಿದ್ದರೂ ನನ್ನ ಮನಸ್ಸು ಬೇರೆ ಬೇರೆ ವಿಚಾರಗಳ ಕಡೆಗೆ ಆಸಕ್ತಿ ತೋರುತ್ತಿದೆ. ನಿನ್ನ ಕುರಿತು ನನ್ನ ಭಕ್ತಿ ಕಡಿಮೆ ಆಗುತ್ತಿದೆ ಆದ್ದರಿಂದ ಈ ಮನಸ್ಸನ್ನು ಬೇರೆಕಡೆಗೆ ಸೆಳೆಯದಂತೆ ಕರುಣಿಸು ಸಿರಿಕೃಷ್ಣರಾಯ ಎಂದು ಶ್ರೀವ್ಯಾಸರಾಯರು ಹಾಡುತ್ತಿದ್ದಾರೆ.

ಮನಸ್ಸನ್ನು ಕೇಂದ್ರೀಕರಿಸಿ ನಮ್ಮ ಗುರಿಯನ್ನು ತಲುಪುವ ಕುರಿತು ಈ ಕೀರ್ತನೆ ತಿಳಿಸುತ್ತದೆ.

ಗಂಡನು ಪ್ರಿಯನಾಗಿದ್ದರೂ ಬೇರೆ ಪುರುಷನನ್ನು ಇಷ್ಟ ಪಡುವಂತ ಕೆಟ್ಟ ಮನಸ್ಸು ನೀಡಬೇಡ.
ಕಿವಿಗೆ ಹಿತವಾದ ಒಳ್ಳೆಯ ಜೀವನ ಸಂದೇಶಗಳಂತಹ ತತ್ವಗಳಿದ್ದರೂ ಕೆಟ್ಟ ವಿಚಾರಗಳ ಕಡೆಗೆ ಈ ಮನಸ್ಸು ಸೆಳೆಯುತ್ತಿದೆ. ಮತ್ತೆ ಹಿತನುಡಿಗಳ ಕಡೆಗೆ ವಾಲಿಸು ನನ್ನ ಮನಸ್ಸುನ್ನು ಎಂದು ನಮ್ಮ ಚಂಚಲತೆಯನ್ನು ಸರಿಪಡಿಕೊಳ್ಳುವ ಕುರಿತು ಹೇಳುತ್ತಿದ್ದಾರೆ.

ನಿತ್ಯವೂ ಶ್ರೇಷ್ಠವಾದ ಆಹಾರ ಸೇವಿಸುತ್ತಿದ್ದರೂ ಈ ಮನಸ್ಸು ಹೆಂಡವನ್ನು ಚಿಂತಿಸಿ ಆಸೆಪಡುವಂತೆ, ಆನೆಯು ಶ್ರೇಷ್ಠನದಿಯಲ್ಲಿ ಸ್ನಾನಮಾಡಿ ಬಂದು ತುಂಬಾ ಆನಂದದಿಂದ ಕೆಸರನ್ನು ಮೈಮೇಲೆ ಎರಚಿಕೊಳ್ಳುವಂತೆ ಉತ್ತಮವಾದ ನಮ್ಮ ಗುಣವನ್ನು, ಮನಸ್ಸನ್ನು ಕೆಟ್ಟ ಆಲೋಚನೆ ಮೂಲಕ ಹಾಳು ಮಾಡಿಕೊಳ್ಳುತ್ತಿದ್ದೇವೆ. ಇದನ್ನು ನಿಯಂತ್ರಣ ಮಾಡುವ ಮೂಲಕ ನಮ್ಮ ಶ್ರೇಷ್ಠತೆ ಉಳಿಸಿಕೊಳ್ಳಬೇಕಿದೆ.

ಶ್ರೇಷ್ಠನಾದ ಗುಣಪೂರ್ಣನಾದ ಸಿರಿ ಕೃಷ್ಣರಾಯನೇ ನಿನ್ನ ಜೋಡಿಪಾದಗಳ ಧ್ಯಾನಿಸುತ್ತಲೇ ನನ್ನ ಮನಸ್ಸು ಚಂಚಲವಾಗದಂತೆ ಕರುಣಿಸಿ ಸ್ಥಿರಗೊಳಿಸು ಎಂದು ಶ್ರೀ ವ್ಯಾಸರಾಯರು ತಿಳಿಸಿದ್ದಾರೆ.


ಬೆಳಗುತಿದೆ ಬೆಳಗುತಿದೆ ಭಾನುವಿನ ಬೆಳಕು
- ತಿಮ್ಮಪ್ಪ ದಾಸ

ಬೆಳಕು - ಜ್ಞಾನ


ಸೂರ್ಯನ ಬೆಳಕು ಸರ್ವವನ್ನು ಹೊಳೆಯುಂತೆ ಮಾಡುತ್ತಾ ಬೆಳಗುತಿದೆ.

ಈ ಬೆಳಕು ಅಮಿತಾಂಡಕೋಟಿ ಎಂದರೆ ಅಳತೆಗೆ ಮೀರಿದ ಪ್ರಕಾಶವನ್ನು ಬೆಳಗುವಂತಹ ಬೆಳಕಾಗಿದೆ. ವಿಶ್ವವ್ಯಾಪಿ ಅಣುವಿನಿಂದ ಆಕಾಶದ ತನಕ ಎಲ್ಲಕ್ಕೂ ಬೆಳಕು ನೀಡುತ್ತಿದ್ದಾನೆ ಸೂರ್ಯ.

ಕತ್ತಲೆಯ ಗುಂಪುಗಳ ಇಲ್ಲವಾಗಿಸುವಂತಹ ಬೆಳಕು. ಅಂದರೆ ಬೆಳಕು ಇಲ್ಲಿ ಜ್ಞಾನದ ಸಂಕೇತ. ಅಜ್ಞಾನವನ್ನು ದೂರಮಾಡಲು ಜ್ಞಾನದ ಬೆಳಕು ಬೇಕು.
ಬೆಳಕು ಒಳ್ಳೆಯ ಮನಸ್ಸಿನ ರೂಪವಾಗಿ, ನಿರ್ಮಲ ಆಲೋಚನೆಯ ನೀಡುವ, ಶೋಭಿಸುವ ರೂಪದಲ್ಲಿ ಬೆಳಕು ಬರುತ್ತದೆ. ಜ್ಞಾನಿ ಯಾವಾಗಲೂ ತೇಜಸ್ಸು ತುಂಬಿರುತ್ತಾನೆ.

ಪರಸ್ಪರ ಮನೆಮನೆಗಳ, ಮನಮನಗಳ ಎದುರಾಗಿ, ಜೊತಯಾಗಿ ಬೆಳಕು ವಿಶ್ವಾಸ ತುಂಬುತ್ತದೆ.
ತಪಸ್ಸಿನಂತೆ ಕಲಿತವರ ಮನಸ್ಸಿನಲ್ಲಿ ಮುಖ್ಯ ಪಾತ್ರದಲ್ಲಿ ಬೆಳಕು ಎಂದರೆ ಜ್ಞಾನ ಕಾಣುತ್ತದೆ.
ಈ ಜ್ಞಾನವೆಂಬ ಬೆಳಕು ದೇವತೆಗಳು ತಾವೇ ಸಂಪಾದಿಸಿದ ಶ್ರೇಷ್ಠತೆಯಂತೆ ವಿಶೇಷವಾದುದು.
ಈ ಬೆಳಕಿಗೆ ಅಂತ್ಯವೂ, ಪ್ರಾರಂಭವೂ ಇರುವುದಿಲ್ಲ.

ಈ ಬೆಳಕು ನಮ್ಮಿಂದ ಹಲವು ಕಾರ್ಯಗಳನ್ನು ಮಾಡಿಸುತ್ತದೆ. ಅಷ್ಟೇ ಅಲ್ಲದೆ ಕಮಲದಂತೆ ಕಾರ್ಯದ ಮೂಲಕ ನಮ್ಮ ಕಶ್ಮಲತೆಯನ್ನು ಕಳೆದು ನಿರ್ಮಲವಾಗಿಸುತ್ತದೆ.
ಆಕಾಶದಂತೆ ಅಪರಿಮಿತ ದೂರದಲ್ಲಿ ನಮ್ಮ ಆಲೋಚನೆಗೂ ಮೀರಿ ಬಹು ಎತ್ತರದಲ್ಲಿ ಸದಾ ಶೋಭಿಸುತ್ತದೆ ಈ ಬೆಳಕು. ಈ ಜಗತ್ತಿನ ಸರ್ವ ಚಲನೆಯನ್ನು ನಮ್ಮ ಕಣ್ಣಿನ ಮೂಲಕ ಕಾಣಿಸುತ್ತದೆ. ಅರಿವುಂಟುಮಾಡುತ್ತದೆ.  ಜ್ಞಾನವೂ ಕೂಡ ಹೀಗೆ ಶ್ರೇಷ್ಠ.

ಯಾವುದೇ ಕಾರ್ಯಕ್ಕೆ ಬೆಳಕು ಕಾರಣವಾಗಿ ಕಾಣುತ್ತದೆ. ಈ ಭೂಮಿಯ ಜೀವಿಗಳಲ್ಲೇ ಅಡಗಿ ಯಾರನ್ನೂ ಮೀರದೆ ಜೊತೆಯಾಗಿರುತ್ತದೆ. ಬೆಳಕು ಮೂರು ಲೋಕಕ್ಕೂ ಪಾಪಗಳ ಅಳಿಸಿ ಮುಕ್ತಿ ನೀಡುತ್ತಾ ಸುಖವನ್ನು  ತರುತ್ತದೆ. ಪಾರಮಾರ್ಥಿಕವಾದ ಪರಬ್ರಹ್ಮ ಅಂದರೆ ಸರ್ವವನ್ನೂ ಶ್ರೇಷ್ಠವಾಗಿ ವಿಚಾರಮಾಡುವಂತಹ ದ್ದು ಈ ಬೆಳಕು ಎಂದರೆ ಜ್ಞಾನ ಎಂದರ್ಥ.

ಶ್ರೇಷ್ಠತೆಯಲ್ಲಿ ಪರಿಶುದ್ಧವಾಗಿ ನಮ್ಮ ಪಾಪಗಳನ್ನು ಅಂದರೆ ತಪ್ಪುಗಳನ್ನು ಇಲ್ಲವಾಗಿಸುವ(ನಾಶಮಾಡುವ) ಬೆಳಕು.
ಯಾರು ಈ ಜ್ಞಾನಕ್ಕೆ (ಬೆಳಕು) ಶರಣಾಗುವರೋ ಕಾಯುತ್ತಾ ಸುಲಭವಾದ ಸುಖವನ್ನು ನೀಡುತ್ತದೆ.
ತಿಮ್ಮಪ್ಪದಾಸರು ತಮ್ಮ ಕೀರ್ತನೆಯ ಅಂಕಿತ ದೇವರಾದ ತಿರುಪತಿಯ ವಾಸಿ ವರದ ವೆಂಕಟರಮಣನ ಹೆಸರಿನ ಉಚ್ಚಾರವೇ ಈ ಸೂರ್ಯನ ಬೆಳಕು ಎಂದಿದ್ದಾರೆ. ಅಂದರೆ ನಮ್ಮ ಭಕ್ತಿಯು ನಮ್ಮ ಸರ್ವಕಾರ್ಯಗಳಲ್ಲೂ ನಾವು ನಂಬುವ ದೇವರ ಮೇಲೆ ಎಷ್ಟು ಇರುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ಇದ್ದರೆ ಎಲ್ಲಾ ಜ್ಞಾನಗಳು ಬೆಳಕಿನಂತೆ ಲಭಿಸುತ್ತವೆ. ಬದುಕನ್ನು ಬೆಳಗುತ್ತವೆ.






ವ್ಯಾಸರಾಯರ ಕುರಿತು ಮಾಹಿತಿ


ಸಂಪಾದಿಸಿ

ಜನ್ಮಸ್ಥಳ - ಮೈಸೂರು ಜಿಲ್ಲೆಯ ಬನ್ನೂರು. ವ್ಯಾಸರಾಯರ ತಂದೆ ರಾಮಾಚಾರ್ಯರು ಮತ್ತು ತಾಯಿಯ ಹೆಸರು ಸೀತಾಬಾಯಿ. ವ್ಯಾಸರಾಯರ ಪೂರ್ವಾಶ್ರಮದ ಹೆಸರು ಯತಿರಾಜ. ಅಬ್ಬೂರಿನ ಬ್ರಹ್ಮಣ್ಯತೀರ್ಥರಿಂದ ಸನ್ಯಾಸ ದೀಕ್ಷೆ ಸ್ವೀಕರಿಸಿದರೆಂದು ತಿಳಿದುಬರುತ್ತದೆ. ವ್ಯಾಸರಾಯರು ವಿಜಯ ನಗರ ಸಾಮ್ರಾಜ್ಯಕ್ಕೆ ರಾಜಗುರುಗಳಾಗಿದ್ದರು. ಮಠಾಧಿಪತಿಗಳಾಗಿ ಒಂದೆಡೆಗೆ ರಾಜಗುರುಗಳು ಎನ್ನಿಸಿದ್ದರೆ, ಮತ್ತೊಂದೆಡೆ ಧರ್ಮೋಪದೇಶಕರೂ ಆಗಿದ್ದರು. ಸಾಳುವ ನರಸಿಂಹನ ಆಳ್ವಿಕೆಯ ಕಾಲದಿಂದ, ಅಚ್ಚುತರಾಯನ ಆಳ್ವಿಕೆಯವರೆಗೆ, ಸುಮಾರು ಅರವತ್ತು ವರ್ಷಗಳ ಕಾಲ ಸಕಲ ರಾಜಮಹಾರಾಜರಿಂದ ಸನ್ಮಾನಿಸಲ್ಪಟ್ಟಿದ್ದರು. ವಿಜಯನಗರದ ಪ್ರಖ್ಯಾತ ದೊರೆಯೆನಿಸಿದ್ದ ಕೃಷ್ಣದೇವರಾಯನು ವ್ಯಾಸರಾಯರನ್ನು ಗುರುಗಳಾಗಿ ಸ್ವೀಕರಿಸಿದ್ದನೆಂದು ತಿಳಿದುಬಂದಿದೆ.

ಕಾಲವಾದ ಸ್ಥಳ ಮತ್ತು ದಿನಸಂಪಾದಿಸಿ

ವ್ಯಾಸರಾಯರು ೧೫೪೮ , ಫಾಲ್ಗುಣ ಮಾಸದ ಚತುರ್ಧಿ ದಿನದಂದು, ಹಂಪೆ ಯಲ್ಲಿ ಕಾಲವಾದರು. ಇವರ ಬೃಂದಾವನವು ಆನೆಗೊಂದಿಯ ಸಮೀಪವಿರುವ ತುಂಗಭದ್ರಾ ದ್ವೀಪದಲ್ಲಿದೆ. ಈ ಸ್ಥಳವನ್ನು ನವ ಬೃಂದಾವನ ಎಂದು ಕರೆಯಲಾಗುತ್ತದೆ.

ಕೃತಿಗಳುಸಂಪಾದಿಸಿ

ದಾಸಸಾಹಿತ್ಯ ಪರಂಪರೆಯನ್ನು ಶ್ರೀಪಾದರಾಜರ ತರುವಾಯ ಬೆಳೆಸಿದವರೆಂದರೆ ವ್ಯಾಸರಾಯರು. ಈವರೆಗೆ ವ್ಯಾಸರಾಯರು ರಚಿಸಿರುವ ೧೧೯ ಕೀರ್ತನೆಗಳು ಲಭ್ಯವಾಗಿವೆ. ಇದರಲ್ಲಿ ಉಗಾಭೋಗಗಳು ಸೇರಿವೆ. ಅಂಕಿತ ಪ್ರಧಾನ ಪಧ್ಧತಿ ಇವರಿಂದಲೇ ಪ್ರಾರಂಭವಾಯಿತು. ಶ್ರೀಕೃಷ್ಣ ಎಂಬುದು ವ್ಯಾಸರಾಯರ ಅಂಕಿತ. 



ಶಿಶುನಾಳ ಶರೀಫರು ತತ್ವಪದಗಳ ರೂವಾರಿ.

ಜನನಸಂಪಾದಿಸಿ

ಶಿಶುನಾಳ ಶರೀಫರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಕ್ರಿ.ಶ. ೧೮೧೯ ಮಾರ್ಚ ೭ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ. ಮುಲ್ಕಿ ಪರೀಕ್ಷೆ ಪಾಸು ಮಾಡಿದ ಬಳಿಕ ಶರೀಫರು ಕೆಲ ಕಾಲ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರೆಂದು ಕೆಲಸ ಮಾಡಿದರು.

ವಿದ್ಯಾಭ್ಯಾಸಸಂಪಾದಿಸಿ

ಆದರೆ ಮುಂದೆ ಈ ಕೆಲಸವನ್ನು ಬಿಟ್ಟು ಬಿಟ್ಟರು. ಈ ಸಮಯದಲ್ಲಿ ಶರೀಫರಿಗೆ ಕಳಸದ ಗುರು ಗೋವಿಂದಭಟ್ಟರಿಂದ ಅನುಗ್ರಹವಾಯಿತು. ಮಗನು ಕೆಲಸವನ್ನು ಬಿಟ್ಟು ಆಧ್ಯ್ಶಾತ್ಮಚಿಂತನೆಯಲ್ಲಿ ತೊಡಗಿಸಿಕೊಂಡದ್ದರಿಂದ ಶರೀಫರ ತಂದೆ ತಾಯಿ ಅವರಿಗೆ ಕುಂದಗೋಳ ನಾಯಕ ಮನೆತನದ ಫಾತಿಮಾ ಎಂಬ ಕನ್ಯೆಯೊಂದಿಗೆ ಮದುವೆ ಮಾಡಿದರು.
ಕೆಲವು ಸಮಯದ ನಂತರ ಇವರಿಗೆ ಒಂದು ಹೆಣ್ಣು ಮಗು ಜನಿಸಿತು. ದುರ್ದೈವದಿಂದ ಕೆಲವು ತಿಂಗಳುಗಳಲ್ಲಿ ಹೆಂಡತಿ ತೀರಿಕೊಂಡರು. ಶರೀಫರಿಗೆ ಜೀವನದಲ್ಲಿ ಬೇಸರವಾದರೂ, ದೇವರಲ್ಲಿ ನಂಬಿಕೆ ಉಳಿದಿತ್ತು. ಶರೀಫರು ಆ ಬಳಿಕ ತಮ್ಮ ಜೀವನವನ್ನು ಆಧ್ಯಾತ್ಮಸಾಧನೆಗೆ ಮುಡಿಪಿಟ್ಟರು. ತಾಳ್ಮೆಯಿಂದ ಸಜ್ಜನರ ಹಾಗೂ ವಿದ್ಯಾವಂತರ ಸಹವಾಸದಲ್ಲಿಯೇ ಕಾಲ ಕಳೆಯುತ್ತಾ ಬಂದರು. ತಮಗೆ ಸರಿಯಾಗಿ ಮಾರ್ಗದರ್ಶನ ನೀಡುವಂತಹ ಗುರುವಿಗಾಗಿ ಅವರು ಊರೂರು ಅಲೆದರು.
ಕೊನೆಗೆ ಗೋವಿಂದಭಟ್ಟ ಎಂಬ ಗುರುವಿನಲ್ಲಿ ಸರಿಯಾದ ಮಾರ್ಗದರ್ಶನ ದೊರೆಯಿತು. ಯಾವುದೇ ಮತತ ಬಗ್ಗೆ ಮೂಡನಂಬಿಕೆ ಇಲ್ಲದ ಈ ಗುರುಗಳು ಶರೀಫರಿಗೆ ತುಂಬಾ ಮೆಚ್ಚುಗೆಯಾದರು. ಗುರುಶಿಷ್ಯರಿಬ್ಬರೂ ಮಸೀದಿಗಳಿಗೆ, ದೇವಾಲಯಗಳಿಗೆ ಸಂದರ್ಶನಕ್ಕಾಗಿ ಹೊರಟರು. ಶರೀಫರು ಅನೇಕ ಹಾಡುಗಳನ್ನು ರಚಿಸಿ ಹಾಡಿದರು. ಈ ಗುರುಗಳ ಜೊತೆಗೆ ನವಲಗುಂದದ ನಾಗಲಿಂಗಮತಿ ಮತ್ತು ಗಂಗೆಯ ಮಡಿವಾಳಪ್ಪ ಎಂಬುವರು ಸಹ ಶರೀಫರ ಮೇಲೆ ಹೆಚ್ಚಿನ ಪರಿಣಾಮ ಬೀರಿದರು.
ಶರೀಫರು ಹಾಡಿದ ಪದಗಳು ಧಾರವಾಡ ಜಿಲ್ಲೆಯ ಆಡುಭಾಷೆಯ ಶೈಲಿಯಲ್ಲಿವೆ. ಈ ಪದಗಳಲ್ಲಿ ಕೆಲವು ದೇವತಾಸ್ತುತಿಯ ಪದಗಳಾದರೆ, ಇನ್ನು ಕೆಲವು ಪದಗಳು ತತ್ವಬೋಧನೆಯ ಪದಗಳಾಗಿವೆ.ಹೆಚ್ಚಿನ ಪದಗಳು ಕನ್ನಡದಲ್ಲಿ ಇದ್ದರೂ ಸಹ ಕೆಲವು ಪದಗಳು ಉರ್ದು ಭಾಷೆಯಲ್ಲಿವೆ.
ಹೊಸಗನ್ನಡ ಅರುಣೋದಯ ಸಾಹಿತ್ಯದ ಮುಂಬೆಳಗಿನ ಕಾಲದಲ್ಲಿ ತಮ್ಮ ಅನುಭಾವಕಾವ್ಯದ ಹೊಂಗಿರಣವೊಂದನ್ನು ಹಾಯಿಸಿದ ಪ್ರಸಿದ್ಧ ಅನುಭಾವಿ ಕವಿ. ಇವರ ಮೊದಲಿನ ಹೆಸರು ಮಹಮ್ಮದ್ ಶರೀಫ್. ಶಿಗ್ಗಾವಿ ತಾಲ್ಲೂಕಿನ ಶಿಶುವಿನಾಳ ಇವರ ಜನ್ಮಸ್ಥಳ. 1819 ಮಾರ್ಚ್ 7 ರಂದು ಜನಿಸಿದರು. ಕನ್ನಡ ಮುಲ್ಕೀ ಪರೀಕ್ಷೆಯವರೆಗೆ ಓದಿದ ಇವರು, ಆರಂಭದಲ್ಲಿ ಕೆಲಕಾಲ ಹಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕರಾಗಿದ್ದರಾದರೂ ಬೇಗನೆ ಅದರ ಹಂಗು ಹರಿದುಕೊಂಡು ಆಧ್ಯಾತ್ಮಸಾಧನೆಗೆ ತಮ್ಮನ್ನು ಸಮರ್ಪಿಸಿ ಕೊಂಡರು.
ಅಭಿಜಾತ ಕಲಾವಿದರಾಗಿದ್ದ ಶಿಶುನಾಳರು ಚಿಕ್ಕಂದಿನಲ್ಲಿಯೇ ಹಳ್ಳಿಯ ಜಾತ್ರೆ ಉತ್ಸವಗಳಲ್ಲಿ ಶರಣರ ವಚನಗಳನ್ನೂ ಅನುಭಾವ ಪದಗಳನ್ನೂ ಹಾಡುತ್ತ, ಬಹುರೂಪಿಗಳ ಹಾಗೆ ವಿವಿಧ ವೇಷ ಹಾಕುತ್ತ, ಬಗೆಬಗೆಯ ಬಯಲಾಟಗಳಲ್ಲಿ ಪಾತ್ರವಹಿಸುತ್ತ ತಮ್ಮ ಕಲೆಗಾರಿಕೆಯನ್ನು ಜನಮನದ ವಿಲಾಸ-ವಿಕಾಸಗಳಿಗೆ ಮುಡಿಪಿಡಲು ಮೊದಲುಮಾಡಿದರು. ಮೊಹರಂ ಪರ್ವ ಸಮಯದಲ್ಲಿ ತಲೆ ಎತ್ತುವ ಕರ್ಬಲಾ ಮೇಳಗಳಿಗಾಗಿ ರಿವಾಯತ್ ಪದ ರಚಿಸಿಕೊಟ್ಟರು, ಲಾವಣಿಗಳನ್ನೂ ಬರೆದರು. ಹೀಗೆ ನಿಧಾನವಾಗಿ ಸಾಹಿತ್ಯಪಥದಲ್ಲಿ ತಮ್ಮ ಹೆಜ್ಜೆ ಮೂಡಿಸಿ, ಮುಂದಿನ ಸೃಷ್ಟಿಗೆ ಅಗತ್ಯ ವಾದ ಪೂರ್ವಸಿದ್ಧತೆ ಮಾಡಿಕೊಂಡರು. ಕಳಸದ ಗುರುಗೋವಿಂದ ಭಟ್ಟರು, ಅಂಕಲಗಿಯ ಅಡವಿ ಸ್ವಾಮಿಗಳು, ಗರಗದ ಮಡಿವಾಳಪ್ಪ ನವರು, ನವಿಲುಗುಂದದ ನಾಗಲಿಂಗಪ್ಪನವರು, ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮಿಗಳು ಮುಂತಾದ ಸಮಕಾಲೀನ ಸಾಧುಸತ್ಪುರುಷರ ಸಾನ್ನಿಧ್ಯ, ಸಂಸರ್ಗಗಳಿಂದ ಅನುಭಾವಿಯಾಗಿ ಮಾಗಿದರು.
ಕನ್ನಡ ಸಂಸ್ಕಂತಿಯ ಸರ್ವಧರ್ಮಸಹಿಷ್ಣುಭಾವ ಮತ್ತು ಆಧ್ಯಾತ್ಮಿಕ ಪರಂಪರೆಯ ಸರ್ವಸಮನ್ವಯ ಅನುಭಾವ ಸಂಪತ್ತನ್ನು ಅರಗಿಸಿಕೊಂಡು ಇವರು ರಚಿಸಿದ ಅನುಭವ ಪದಗಳು ಆಪ್ತವಾದ ಕಳಕಳಿಗೆ ನೆಲೆ ಯಾಗಿವೆ. ಹಳ್ಳಿಯ ಬಾಳಿನ ದಿನದಿನದ ಬದುಕಿನಲ್ಲಿ ತಮ್ಮ ಕಣ್ಮನಗಳನ್ನು ಸೆಳೆದ ಒಂದೊಂದು ಸನ್ನಿವೇಶ-ಸಂಗತಿ, ವಸ್ತು-ವ್ಯಕ್ತಿ, ಪಶು-ಪಕ್ಷಿ ಮೊದಲಾದವುಗಳನ್ನೇ ಒಂದು ರೂಪಕವನ್ನಾಗಿಯೋ ದೃಷ್ಟಾಂತವ ನ್ನಾಗಿಯೋ ಪ್ರತಿಮೆಯನ್ನಾಗಿಯೋ ಮಾಡಿಕೊಂಡು ಅವುಗಳಲ್ಲಿ ತಮ್ಮ ಅನುಭವದ ಬೆಳಕು ಮತ್ತು ಅನುಭಾವದ ಬೆಳಗನ್ನು ವರ್ಣಮಯವಾಗಿ ಹೇಳಿದ್ದಾರೆ. ತಮ್ಮ ಜೀವಮಾನದುದ್ದಕ್ಕೂ ಇವರು ಬರೆದ ಹಾಡು, ಒರೆದ ಪಾಡು ಒಂದೇ ಆಗಿದೆ. ಬೋಧ ಒಂದೇ, ಬ್ರಹ್ಮನಾದ ಒಂದೇ ಎಂಬುದು ಅವರ ಬೀಜಮಂತ್ರವಾಗಿದ್ದು ನಡಿಯೊ ದೇವರ ಚಾಕರಿಗೆ, ಮುಕ್ತಿಗೊಡೆಯ ಖಾದರ ಲಿಂಗ ನೆಲಸಿರ್ಪ ಗಿರಿಗೆ ಎಂಬುದು ಇವರು ತಮ್ಮ ಮನಕ್ಕೂ ಜನಕ್ಕೂ ಕೊಟ್ಟ ಜೀವಾಳದ ಕರೆಯಾಗಿದೆ. ಇವರ ದೃಷ್ಟಿಯಲ್ಲಿ ಸನಾತನ ವೈದಿಕ ಮತ ಎತ್ತಿಹಿಡಿಯುವ ಬ್ರಹ್ಮತತ್ತ್ವ, ತಮ್ಮ ಪರಿಸರದಲ್ಲಿ ಪ್ರಭಾವಕಾರಿಯಾಗಿದ್ದ ವೀರಶೈವ ಮತದ ಲಿಂಗತತ್ತ್ವ ಹಾಗೂ ತಮ್ಮ ಮನೆತನಕ್ಕೆ ಪೂಜ್ಯವಾಗಿದ್ದ ಹುಲಗೂರ ಖಾದರಶಾ ಸಾಧುವಿನ ಸಮಾಧಿತತ್ತ್ವ-ಇವೆಲ್ಲವೂ ಮೂಲತಃ ಒಂದೇ. ಇದರಿಂದಾಗಿ ಇವರು ಸರ್ವಧರ್ಮಸಮನ್ವಯದ ಉಜ್ಜ್ವಲ ಮೂರ್ತಿಯಾಗಿ ಹಿಂದು-ಮುಸ್ಲಿಮ್ ಬಾಂಧವ್ಯದ ಧವಲಕೀರ್ತಿಯಾಗಿ ಉತ್ತರ ಭಾರತದ ಮಹಾತ್ಮ ಕಬೀರರಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಜನಮನದ ಗದ್ದುಗೆ ಏರಿದರು. ಇದಲ್ಲದೆ ತಮ್ಮ ಅಭಿವ್ಯಕ್ತಿಯಲ್ಲಿ ಅಳವಡಿಸಿಕೊಂಡ ಜನಪದ ಭಾಷೆಯ ಸೊಗಡು-ಗತ್ತು, ಗ್ರಾಮೀಣ ಸಂಗೀತದ ಲಯ-ಲಾಸ್ಯಗಳಿಂದಾಗಿಯೂ ಇವರು ಜನಮನವನ್ನು ಸೂರೆಗೊಂಡರು. ಹೀಗೆ ಆಧ್ಯಾತ್ಮಿಕ ಸಾಧನೆಯ ಸಿದ್ಧಿಯನ್ನು ಮುಟ್ಟಿದಮೇಲೆ ತಮ್ಮಲ್ಲಿ ಬಂದವರಿಗೆ ಧರ್ಮನೀತಿ ಬೋಧೆ ಮಾಡಲೆಂದು ಇವರು ತಮ್ಮ ಮನೆ ಹತ್ತಿರದಲ್ಲಿ ಕುಳಿತುಕೊಳ್ಳುತ್ತಿದ್ದ ಕಟ್ಟೆಯೊಂದು ಇಂದಿಗೂ ಇದ್ದು ಬೋಧಪೀಠ ಎಂಬುದಾಗಿ ಪೂಜಿಸಲ್ಪಡುತ್ತದೆ.